
ಕವಿ : ಜಿ.ಪಿ.ರಾಜರತ್ನಂ
ನಾಯಿಮರಿ ನಾಯಿಮರಿ ತಿಂಡಿ ಬೇಕೆ
ತಿಂಡಿ ಬೇಕು ತೀರ್ಥ ಬೇಕು ಎಲ್ಲ ಬೇಕು
ನಾಯಿಮರಿ ನಿನಗೆ ತಿಂಡಿ ಯಾಕೆ ಬೇಕು
ತಿಂಡಿ ತಿಂದು ಗಟ್ಟಿಯಾಗಿ ಮನೆಯ ಕಾಯಬೇಕು
ನಾಯಿಮರಿ ಕಳ್ಳ ಬಂದರೆ ಎನು ಮಾಡುವೆ
ಲೊಳ್ ಲೊಳ್ ಬೊವ್ ಎಂದು ಕೂಗಿ ಆಡುವೆ
ಜಾಣಮರಿ ತಾಳು ಹೋಗಿ ತಿಂಡಿ ತರುವೆನು
ತಾ ನಿನ್ನ ಮನೆಯ ನಾನು ಕಾಯುತಿರುವೆನು