ಅಲ್ಲಮ ಪ್ರಭುಗಳ ವಚನಗಳು
ಹೊನ್ನು ಮಾಯೆಯೆಂಬರು
ಹೊನ್ನು ಮಾಯೆಯಲ್ಲ.
ಹೆಣ್ಣು ಮಾಯೆಯೆಂಬರು
ಹೆಣ್ಣು ಮಾಯೆಯಲ್ಲ.
ಮಣ್ಣು ಮಾಯೆಯೆಂಬರು
ಮಣ್ಣು ಮಾಯೆಯಲ್ಲ.
ಮನದ ಮುಂದಣ ಆಶೆಯೇ ಮಾಯೆ ಕಾಣಾ
ಗುಹೇಶ್ವರ !
ಎತ್ತಣ ಮಾಮರ
ಎತ್ತಣ ಕೋಗಿಲೆ ?
ಎತ್ತಣಿಂದೆತ್ತ ಸಂಬಂಧವಯ್ಯ ?!
ಬೆಟ್ಟದ ನೆಲ್ಲಿಯ ಕಾಯಿ
ಸಮುದ್ರದೊಳಗಣ ಉಪ್ಪು
ಎತ್ತಣಿಂದೆತ್ತ ಸಂಬಂಧವಯ್ಯಾ ?!
ಗುಹೇಶ್ವರಲಿಂಗಕ್ಕೆಯೂ
ಎನಗೆಯೂ
ಎತ್ತಣಿಂದೆತ್ತ ಸಂಬಂಧವಯ್ಯ ?!
ಬೆಟ್ಟಕ್ಕೆ ಚಳಿಯಾದಡೆ
ಏನ ಹೊದಿಸುವಿರಯ್ಯ !
ಬಯಲು ಬತ್ತಲೆಯಾದಡೆ
ಏನ ನುಡಿಸುವರಯ್ಯ ?
ಭಕ್ತನು ಭವಿಯಾದಡೆ
ಏನನುಪಮಿಸುವೆನಯ್ಯ – ಗುಹೇಶ್ವರ ?
ಲಿಂಗ ಒಳಗೋ ಹೊಱಗೋ ?
ಬಲ್ಲಡೆ ನೀವು ಹೇಳಿರೇ !
ಲಿಂಗ ಎಡನೋ ಬಲನೋ ?
ಬಲ್ಲಡೆ ನೀವು ಹೇಳಿರೇ !
ಲಿಂಗ ಮುಂದೋ ಹಿಂದೋ ?
ಬಲ್ಲಡೆ ನೀವು ಹೇಳಿರೇ !
ಲಿಂಗ ಸ್ಥೂಲವೋ ಸೂಕ್ಷ್ಮವೋ ?
ಬಲ್ಲಡೆ ನೀವು ಹೇಳಿರೇ !
ಲಿಂಗ ಪ್ರಾಣವೋ, ಪ್ರಾಣ ಲಿಂಗವೋ ?
ಬಲ್ಲಡೆ ನೀವು ಹೇಳಿರೇ ? ಗುಹೇಶ್ವರ
ಕೃಪೆ : ವಿಚಾರ ಮಂಟಪ
Comments
ಪ್ರಿಯ ಬ್ಲಾಗಿಗರೆ,
ಕಣಜ ಜಾಲತಾಣ (www.kanaja.in) ಕರ್ನಾಟಕ ಜ್ಞಾನ ಆಯೋಗದ ಮಹತ್ವದ ಕನ್ನಡ ಅಂತರಜಾಲ ಜ್ಞಾನಕೋಶ ಯೋಜನೆ. ಈ ಯೋಜನೆಯು ಕನ್ನಡಿಗರಿಗಾಗಿಯೇ ರೂಪುಗೊಳ್ಳುತ್ತಿರುವ ಜಾಲತಾಣ. ಈ ಜಾಲತಾಣದ ಬಗ್ಗೆ ನಿಮ್ಮ ಬ್ಲಾಗಿನಲ್ಲೂ ಸೂಕ್ತ ಪ್ರಚಾರ ಸಿಗಬೇಕೆಂಬುದು ನಮ್ಮ ವಿನಂತಿ. ದಯಮಾಡಿ (http://kanaja.in/?page_id=10877) ಈ ಕೊಂಡಿಯಲ್ಲಿ ಇರುವ `ಕಣಜ’ ಬ್ಯಾನರುಗಳನ್ನು ನಿಮ್ಮ ಬ್ಲಾಗಿನಲ್ಲಿ ಪ್ರಕಟಿಸಬೇಕೆಂದು ಕೋರಿಕೆ. ಇಲ್ಲಿ ಕೊಟ್ಟಿರುವ ಚಿತ್ರದ ಕೆಳಗೆ ಇರುವ ಸಂಕೇತ ವಾಕ್ಯವನ್ನು ನಿಮ್ಮ ಬ್ಲಾಗಿನ ಹೊಸ ಬ್ಲಾಗ್ ಪ್ರಕಟಣೆ ಜಾಗದಲ್ಲಿ ಪೇಸ್ಟ್ ಮಾಡಿದರೆ ಕಣಜದ ಬ್ಯಾನರ್ ನಿಮ್ಮಲ್ಲಿ ಪ್ರಕಟವಾಗುತ್ತದೆ. ಎಂಬೆಡ್ ಮಾಡುವ ಬಗೆ ಹೇಗೆಂದು ತಿಳಿಯಬೇಕಿದ್ದರೆ ದಯಮಾಡಿ (projectmanager@kanaja.in) ಈ ಮೈಲಿಗೆ ಕಾಗದ ಬರೆಯಿರಿ.
ಕಣಜ ಜಾಲತಾಣದಲ್ಲಿ ನಿಮ್ಮ ಬ್ಲಾಗುಗಳನ್ನೂ ಪಟ್ಟೀಕರಿಸಲಾಗಿದೆ, ಗಮನಿಸಿ. ಬ್ಲಾಗ್ ಲೋಕದ ಮಾಹಿತಿ ಲೇಖನಗಳು ಕನ್ನಡಕ್ಕೆ ಕೊಡುಗೆ ನೀಡುತ್ತಿರುವುದನ್ನು ಸ್ವಾಗತಿಸುತ್ತ `ಕಣಜ’ವನ್ನೂ ನಿಮ್ಮ ಸಹ-ಬ್ಲಾಗ್ ಎಂದೇ ಪರಿಗಣಿಸಿ ಬೆಂಬಲ ನೀಡಿ, ಪ್ರಚಾರ ನೀಡಿ ಎಂದು ವಿನಂತಿಸಿಕೊಳ್ಳುವೆವು.
ತಮ್ಮ ವಿಶ್ವಾಸಿ
ಬೇಳೂರು ಸುದರ್ಶನ
ಸಲಹಾ ಸಮನ್ವಯಕಾರ, ಕಣಜ ಯೋಜನೆ
(ಕರ್ನಾಟಕ ಜ್ಞಾನ ಆಯೋಗದ ಯೋಜನೆ)
ಈ ಮೈಲ್: projectmanager@kanaja.net
http://www.kanaja.in
ವಿಳಾಸ: ಇಂಟರ್ ನ್ಯಾಶನಲ್ ಇನ್ ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಶನ್ ಟೆಕ್ನಾಲಜಿ ಬೆಂಗಳೂರು
ನಂ 26/ಸಿ, ಎಲೆಕ್ಟ್ರಾನಿಕ್ಸ್ ಸಿಟಿ, ಹೊಸೂರು ರಸ್ತೆ
ಬೆಂಗಳೂರು – 560100
ದೂರವಾಣಿ: ೯೭೪೧೯೭೬೭೮೯
developed nively. please add more details and explainations
ongratulations
best achivement. please develop more thankyou for efforts.