ಕವಿ: ಸಿದ್ದಯ್ಯ ಫುರಾಣಿಕ
ಹೊತ್ತಿತೊ ಹೊತ್ತಿತು ಕನ್ನಡದ ದೀಪ
ಮುಗಿಯಿತೊ ಮುಗಿಯಿತು ಶತಮಾನಗಳ ಶಾಪ
ಕಣ್ಣು ಕುಕ್ಕಿಸುವಂತೆ ದೇದಿಪ್ಯಮಾನ
ಹರ್ಶವುಕ್ಕಿಸುವಂತೆ ಶೊಭಾಯಮಾನ
ಕನ್ನಡದ ಮನೆಯಾಗೆ ಜ್ಯೊಥಿರ್ನಿದಾನ
ಕನ್ನಡದ ಪ್ರಾಣ ಕನ್ನಡದ ಮಾನ
ಉರಿವವರು ಬೇಕಿದನು ಇದರೆಣ್ಣೆಯಾಗಿ
ಸುಡುವವರು ಬೇಕಿದನು ನಿಡುಬತ್ತಿಯಾಗಿ
ಧರಿಸುವರು ಬೇಕಿದನು ಸಿರಿಹಣಥೆಯಾಗಿ
ನನ್ನೆಸುರಾಗಿ ಧರ್ಮಕ್ಕೆ ಬಾಗಿ
ಚಿರಕಾಲ ಬೆಳಗಲಿ ಕನ್ನಡದ ದೀಪ
ಜಗಕೆಲ್ಲ ಬೆಳಕಾಗಿ ಪುಣ್ಯಪ್ರದೀಪ
ಭಾರತಕೆ ಬಲವಾಗಿ ಭವ್ಯಪ್ರದೀಪ
ಕಳೆಯುತ್ತ ತಾಪ ಬೆಳೆಸುತ್ತ ಸಹಿಪ
ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು