ಪರಿಚಯ:
“ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಸಾಹಿತ್ಯ ರಚನೆ ಅವರ ಮೊದಲ ಒಲವು. ಕಾಲೇಜಿನಲ್ಲಿ ಓದುತ್ತಿದ್ದಾಗಲೇ ಕವಿತೆಗಳನ್ನು ಕಟ್ಟಿದರು. ೧೯೧೮ರಲ್ಲಿ ಅವರ ಮೊದಲ ಕವನ “ಪ್ರಭಾತ” ಎಂಬ ಪತ್ರಿಕೆಯಲ್ಲಿ ಪ್ರಕಟವಾಯಿತು. ಅಲ್ಲಿಂದಾಚೆಗೆ ಅವರು ಕಾವ್ಯ ರಚನೆ ಮಾಡುತ್ತಲೇ ಬಂದರು. “ಗರಿ”, “ಕಾಮಕಸ್ತೂರಿ “, “ಸೂರ್ಯಪಾನ”, “ನಾದಲೀಲೆ”, “ನಾಕುತಂತಿ” ಮೊದಲಾದ ಕವನ ಸಂಕಲನಗಳನ್ನು ಪ್ರಕಟಿಸಿದರು. ಕವಿತೆಗಳನ್ನಲ್ಲದೆ ನಾಟಕಗಳು, ಸಂಶೋಧನಾತ್ಮಕ ಲೇಖನಗಳು, ವಿಮರ್ಶೆಗಳನ್ನು ಬೇಂದ್ರೆ ಬರೆದಿದ್ದಾರೆ. ೧೯೨೧ರಲ್ಲಿ ಧಾರವಾಡದಲ್ಲಿ ಅವರು ಗೆಳೆಯರೊಡನೆ ಕಟ್ಟಿದ “ಗೆಳೆಯರ ಗುಂಪು” ಸಂಸ್ಥೆ ಅವರ ಸಾಹಿತ್ಯ ಚಟುವಟಿಕೆಗಳಿಗೆ ಇಂಬು ನೀಡಿತು.
“ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಸಾಹಿತ್ಯ ರಚನೆ ಅವರ ಮೊದಲ ಒಲವು. ಕಾಲೇಜಿನಲ್ಲಿ ಓದುತ್ತಿದ್ದಾಗಲೇ ಕವಿತೆಗಳನ್ನು ಕಟ್ಟಿದರು. ೧೯೧೮ರಲ್ಲಿ ಅವರ ಮೊದಲ ಕವನ “ಪ್ರಭಾತ” ಎಂಬ ಪತ್ರಿಕೆಯಲ್ಲಿ ಪ್ರಕಟವಾಯಿತು. ಅಲ್ಲಿಂದಾಚೆಗೆ ಅವರು ಕಾವ್ಯ ರಚನೆ ಮಾಡುತ್ತಲೇ ಬಂದರು. “ಗರಿ”, “ಕಾಮಕಸ್ತೂರಿ “, “ಸೂರ್ಯಪಾನ”, “ನಾದಲೀಲೆ”, “ನಾಕುತಂತಿ” ಮೊದಲಾದ ಕವನ ಸಂಕಲನಗಳನ್ನು ಪ್ರಕಟಿಸಿದರು. ಕವಿತೆಗಳನ್ನಲ್ಲದೆ ನಾಟಕಗಳು, ಸಂಶೋಧನಾತ್ಮಕ ಲೇಖನಗಳು, ವಿಮರ್ಶೆಗಳನ್ನು ಬೇಂದ್ರೆ ಬರೆದಿದ್ದಾರೆ. ೧೯೨೧ರಲ್ಲಿ ಧಾರವಾಡದಲ್ಲಿ ಅವರು ಗೆಳೆಯರೊಡನೆ ಕಟ್ಟಿದ “ಗೆಳೆಯರ ಗುಂಪು” ಸಂಸ್ಥೆ ಅವರ ಸಾಹಿತ್ಯ ಚಟುವಟಿಕೆಗಳಿಗೆ ಇಂಬು ನೀಡಿತು.
ಜನನ ಬಾಲ್ಯ:
ಬೇಂದ್ರೆ ೧೮೯೬ನೆಯ ಇಸವಿ ಜನವರಿ ೩೧ ರಂದು ಜನಿಸಿದರು. ತಂದೆ ರಾಮಚಂದ್ರ ಭಟ್ಟ, ತಾಯಿ ಅಂಬಿಕೆ(ಅಂಬವ್ವ). ಬೇಂದ್ರೆಯವರ ಕಾವ್ಯನಾಮ ಅಂಬಿಕಾತನಯದತ್ತ. ಬೇಂದ್ರೆ ಮನೆತನದ ಮೂಲ ಹೆಸರು ಠೋಸರ. ವೈದಿಕ ವೃತ್ತಿಯ ಕುಟುಂಬ. ಒಂದು ಕಾಲಕ್ಕೆ ಸಾಂಗ್ಲಿ ಸಂಸ್ಥಾನಕ್ಕೆ ಸೇರಿದ್ದ ಗದಗ ಪಟ್ಟಣದ ಸಮೀಪದ ಶಿರಹಟ್ಟಿಯಲ್ಲಿ ಬಂದು ನೆಲೆಸಿದರು. ದ.ರಾ.ಬೇಂದ್ರೆ ಹನ್ನೊಂದು ವರ್ಷದವರಿದ್ದಾಗ ಅವರ ತಂದೆ ತೀರಿಕೊಂಡರು. ಬೇಂದ್ರೆಯವರು ೧೯೧೯ರಂದು ಹುಬ್ಬಳ್ಳಿಯಲ್ಲಿ ಲಕ್ಷ್ಮೀಬಾಯಿಯವರನ್ನು ವಿವಾಹವಾದರು; ಅವರ ಪ್ರಥಮ ಕಾವ್ಯ ಸಂಕಲನ “ಕೃಷ್ಣ ಕುಮಾರಿ”-ಯು ಆಗಲೇ ಪ್ರಕಟಿಸಲ್ಪಟ್ಟಿತ್ತು.
ಬೇಂದ್ರೆ ೧೮೯೬ನೆಯ ಇಸವಿ ಜನವರಿ ೩೧ ರಂದು ಜನಿಸಿದರು. ತಂದೆ ರಾಮಚಂದ್ರ ಭಟ್ಟ, ತಾಯಿ ಅಂಬಿಕೆ(ಅಂಬವ್ವ). ಬೇಂದ್ರೆಯವರ ಕಾವ್ಯನಾಮ ಅಂಬಿಕಾತನಯದತ್ತ. ಬೇಂದ್ರೆ ಮನೆತನದ ಮೂಲ ಹೆಸರು ಠೋಸರ. ವೈದಿಕ ವೃತ್ತಿಯ ಕುಟುಂಬ. ಒಂದು ಕಾಲಕ್ಕೆ ಸಾಂಗ್ಲಿ ಸಂಸ್ಥಾನಕ್ಕೆ ಸೇರಿದ್ದ ಗದಗ ಪಟ್ಟಣದ ಸಮೀಪದ ಶಿರಹಟ್ಟಿಯಲ್ಲಿ ಬಂದು ನೆಲೆಸಿದರು. ದ.ರಾ.ಬೇಂದ್ರೆ ಹನ್ನೊಂದು ವರ್ಷದವರಿದ್ದಾಗ ಅವರ ತಂದೆ ತೀರಿಕೊಂಡರು. ಬೇಂದ್ರೆಯವರು ೧೯೧೯ರಂದು ಹುಬ್ಬಳ್ಳಿಯಲ್ಲಿ ಲಕ್ಷ್ಮೀಬಾಯಿಯವರನ್ನು ವಿವಾಹವಾದರು; ಅವರ ಪ್ರಥಮ ಕಾವ್ಯ ಸಂಕಲನ “ಕೃಷ್ಣ ಕುಮಾರಿ”-ಯು ಆಗಲೇ ಪ್ರಕಟಿಸಲ್ಪಟ್ಟಿತ್ತು.
ವಿದ್ಯಾಭ್ಯಾಸ:
೧೯೧೩ರಲ್ಲಿ ಮೆಟ್ರಿಕ್ಯುಲೇಶನ್ ಮುಗಿಸಿದ ಬಳಿಕ ಬೇಂದ್ರೆ ಪುಣೆಯ ಕಾಲೇಜಿನಲ್ಲಿ ಓದಿ ೧೯೧೮ರಲ್ಲಿ ಬಿ.ಎ. ಮಾಡಿಕೊಂಡರು. ಹಿಡಿದದ್ದು ಅಧ್ಯಾಪಕ ವೃತ್ತಿ. ೧೯೩೫ರಲ್ಲಿ ಎಂ.ಎ. ಮಾಡಿಕೊಂಡು ಕೆಲಕಾಲ (೧೯೪೪ – ೧೯೫೬) ಸೊಲ್ಲಾಪುರದ ಡಿ.ಎ.ವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು
೧೯೧೩ರಲ್ಲಿ ಮೆಟ್ರಿಕ್ಯುಲೇಶನ್ ಮುಗಿಸಿದ ಬಳಿಕ ಬೇಂದ್ರೆ ಪುಣೆಯ ಕಾಲೇಜಿನಲ್ಲಿ ಓದಿ ೧೯೧೮ರಲ್ಲಿ ಬಿ.ಎ. ಮಾಡಿಕೊಂಡರು. ಹಿಡಿದದ್ದು ಅಧ್ಯಾಪಕ ವೃತ್ತಿ. ೧೯೩೫ರಲ್ಲಿ ಎಂ.ಎ. ಮಾಡಿಕೊಂಡು ಕೆಲಕಾಲ (೧೯೪೪ – ೧೯೫೬) ಸೊಲ್ಲಾಪುರದ ಡಿ.ಎ.ವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು
ಕನ್ನಡ ಸಾಹಿತ್ಯಕ್ಕೆ ಬೇಂದ್ರೆ ಅವರ ಕೊಡುಗೆಗಳು:
ಕೃತಿಗಳು:
ಅಂಬಿಕಾತನಯದತ್ತರ ಸಮಗ್ರ ಕಾವ್ಯ ಸಂಪುಟಗಳು
೧೯೨೨: ಕೃಷ್ಣಾಕುಮಾರಿ;
೧೯೩೨: ಗರಿ;
೧೯೩೪: ಮೂರ್ತಿ ಮತ್ತು ಕಾಮಕಸ್ತೂರಿ;
೧೯೩೭: ಸಖೀಗೀತ;
೧೯೩೮: ಉಯ್ಯಾಲೆ;
೧೯೩೮: ನಾದಲೀಲೆ;
೧೯೪೩: ಮೇಘದೂತ (ಕಾಳಿದಾಸನ ಸಂಸ್ಕೃತ ಮೇಘದೂತದ ಕನ್ನಡ ಅವತರಣಿಕೆ
೧೯೪೬: ಹಾಡುಪಾಡು;
೧೯೫೧: ಗಂಗಾವತರಣ;
೧೯೫೬: ಸೂರ್ಯಪಾನ;
೧೯೫೬: ಹೃದಯಸಮುದ್ರ;
೧೯೫೬: ಮುಕ್ತಕಂಠ;
೧೯೫೭: ಚೈತ್ಯಾಲಯ;
೧೯೫೭: ಜೀವಲಹರಿ;
೧೯೫೭: ಅರಳು ಮರಳು;
೧೯೫೮: ನಮನ;
೧೯೫೯: ಸಂಚಯ;
೧೯೬೦: ಉತ್ತರಾಯಣ;
೧೯೬೧: ಮುಗಿಲಮಲ್ಲಿಗೆ;
೧೯೬೨: ಯಕ್ಷ ಯಕ್ಷಿ;
೧೯೬೪: ನಾಕುತಂತಿ;
೧೯೬೬: ಮರ್ಯಾದೆ;
೧೯೬೮: ಶ್ರೀಮಾತಾ;
೧೯೬೯: ಬಾ ಹತ್ತರ;
೧೯೭೦: ಇದು ನಭೋವಾಣಿ;
೧೯೭೨: ವಿನಯ;
೧೯೭೩: ಮತ್ತೆ ಶ್ರಾವಣಾ ಬಂತು;
೧೯೭೭: ಒಲವೇ ನಮ್ಮ ಬದುಕು;
೧೯೭೮: ಚತುರೋಕ್ತಿ ಮತ್ತು ಇತರ ಕವಿತೆಗಳು;
೧೯೮೨: ಪರಾಕಿ;
೧೯೮೨: ಕಾವ್ಯವೈಖರಿ;
೧೯೮೩: ತಾ ಲೆಕ್ಕಣಕಿ ತಾ ದೌತಿ;
೧೯೮೩: ಬಾಲಬೋಧೆ;
೧೯೮೬: ಚೈತನ್ಯದ ಪೂಜೆ;
೧೯೮೭: ಪ್ರತಿಬಿಂಬಗಳು;
೧೯೨೨: ಕೃಷ್ಣಾಕುಮಾರಿ;
೧೯೩೨: ಗರಿ;
೧೯೩೪: ಮೂರ್ತಿ ಮತ್ತು ಕಾಮಕಸ್ತೂರಿ;
೧೯೩೭: ಸಖೀಗೀತ;
೧೯೩೮: ಉಯ್ಯಾಲೆ;
೧೯೩೮: ನಾದಲೀಲೆ;
೧೯೪೩: ಮೇಘದೂತ (ಕಾಳಿದಾಸನ ಸಂಸ್ಕೃತ ಮೇಘದೂತದ ಕನ್ನಡ ಅವತರಣಿಕೆ
೧೯೪೬: ಹಾಡುಪಾಡು;
೧೯೫೧: ಗಂಗಾವತರಣ;
೧೯೫೬: ಸೂರ್ಯಪಾನ;
೧೯೫೬: ಹೃದಯಸಮುದ್ರ;
೧೯೫೬: ಮುಕ್ತಕಂಠ;
೧೯೫೭: ಚೈತ್ಯಾಲಯ;
೧೯೫೭: ಜೀವಲಹರಿ;
೧೯೫೭: ಅರಳು ಮರಳು;
೧೯೫೮: ನಮನ;
೧೯೫೯: ಸಂಚಯ;
೧೯೬೦: ಉತ್ತರಾಯಣ;
೧೯೬೧: ಮುಗಿಲಮಲ್ಲಿಗೆ;
೧೯೬೨: ಯಕ್ಷ ಯಕ್ಷಿ;
೧೯೬೪: ನಾಕುತಂತಿ;
೧೯೬೬: ಮರ್ಯಾದೆ;
೧೯೬೮: ಶ್ರೀಮಾತಾ;
೧೯೬೯: ಬಾ ಹತ್ತರ;
೧೯೭೦: ಇದು ನಭೋವಾಣಿ;
೧೯೭೨: ವಿನಯ;
೧೯೭೩: ಮತ್ತೆ ಶ್ರಾವಣಾ ಬಂತು;
೧೯೭೭: ಒಲವೇ ನಮ್ಮ ಬದುಕು;
೧೯೭೮: ಚತುರೋಕ್ತಿ ಮತ್ತು ಇತರ ಕವಿತೆಗಳು;
೧೯೮೨: ಪರಾಕಿ;
೧೯೮೨: ಕಾವ್ಯವೈಖರಿ;
೧೯೮೩: ತಾ ಲೆಕ್ಕಣಕಿ ತಾ ದೌತಿ;
೧೯೮೩: ಬಾಲಬೋಧೆ;
೧೯೮೬: ಚೈತನ್ಯದ ಪೂಜೆ;
೧೯೮೭: ಪ್ರತಿಬಿಂಬಗಳು;
ವಿಮರ್ಶೆ
೧೯೩೭: ಸಾಹಿತ್ಯ ಮತ್ತು ವಿಮರ್ಶೆ;
೧೯೪೦: ಸಾಹಿತ್ಯಸಂಶೋಧನೆ;
೧೯೪೫: ವಿಚಾರ ಮಂಜರಿ;
೧೯೫೪: ಕವಿ ಲಕ್ಷ್ಮೀಶನ ಜೈಮಿನಿಭಾರತಕ್ಕೆ ಮುನ್ನುಡಿ;
೧೯೫೯: ಮಹಾರಾಷ್ಟ್ರ ಸಾಹಿತ್ಯ;
ಸಾಯೋ ಆಟ (ನಾಟಕ)
೧೯೬೨: ಕಾವ್ಯೋದ್ಯೋಗ;
೧೯೬೮: ಕನ್ನಡ ಸಾಹಿತ್ಯದಲ್ಲಿ ನಾಲ್ಕು ನಾಯಕರತ್ನಗಳು;
೧೯೭೪: ಸಾಹಿತ್ಯದ ವಿರಾಟ್ ಸ್ವರೂಪ;
೧೯೭೬: ಕುಮಾರವ್ಯಾಸ ಪುಸ್ತಿಕೆ;
೧೯೩೭: ಸಾಹಿತ್ಯ ಮತ್ತು ವಿಮರ್ಶೆ;
೧೯೪೦: ಸಾಹಿತ್ಯಸಂಶೋಧನೆ;
೧೯೪೫: ವಿಚಾರ ಮಂಜರಿ;
೧೯೫೪: ಕವಿ ಲಕ್ಷ್ಮೀಶನ ಜೈಮಿನಿಭಾರತಕ್ಕೆ ಮುನ್ನುಡಿ;
೧೯೫೯: ಮಹಾರಾಷ್ಟ್ರ ಸಾಹಿತ್ಯ;
ಸಾಯೋ ಆಟ (ನಾಟಕ)
೧೯೬೨: ಕಾವ್ಯೋದ್ಯೋಗ;
೧೯೬೮: ಕನ್ನಡ ಸಾಹಿತ್ಯದಲ್ಲಿ ನಾಲ್ಕು ನಾಯಕರತ್ನಗಳು;
೧೯೭೪: ಸಾಹಿತ್ಯದ ವಿರಾಟ್ ಸ್ವರೂಪ;
೧೯೭೬: ಕುಮಾರವ್ಯಾಸ ಪುಸ್ತಿಕೆ;
ಪ್ರಶಸ್ತಿ- ಪುರಸ್ಕಾರ:
ರಾಜ್ಯ ಸಾಹಿತ್ಯ ಅಕಾಡಮಿ ಪುರಸ್ಕಾರ (ಅರಳು ಮರಳು ೧೯೫೮),
ಪದ್ಮಶ್ರೀ (೧೯೬೮)
ಜ್ಞಾನಪೀಠ (ನಾಕುತಂತಿ – ೧೯೭೪)
ಗೌರವ ಡಾಕ್ಟರೆಟ್ (ಮೈಸೂರು ವಿವಿ)
ಪದ್ಮಶ್ರೀ (೧೯೬೮)
ಜ್ಞಾನಪೀಠ (ನಾಕುತಂತಿ – ೧೯೭೪)
ಗೌರವ ಡಾಕ್ಟರೆಟ್ (ಮೈಸೂರು ವಿವಿ)
ನಿಮ್ಮ ಟಿಪ್ಪಣಿ ಬರೆಯಿರಿ