ಪಂಪಭಾರತದ ಚತುರ್ಥಾಶ್ವಾಸಂದಲ್ಲಿ ಬರುವ ಬನವಾಸಿಯ ವರ್ಣನೆ ಬಹಳ ಅನನ್ಯವಾದುದು.
ಬನವಾಸಿದೇಶದ ವರ್ಣನೆ
ಚಂ || ಸೊಗಯಿಸಿ ಬಂದ ಮಾಮರನೆ ತಳ್ತೆಲೆವಳ್ಳಿಯೆ ಪೂತ ಜಾತಿ ಸಂ
ಪಗೆಯೆ ಕುಕಿಲ್ವ ಕೋಗಿಲೆಯೆ ಪಾಡುವ ತುಂಬಿಯೆ ನಲ್ಲರೊಳ್ಮೊಗಂ
ನಗೆಮೊಗದೊಳ್ ಪಳಂಚಲೆಯೆ ಕೂಡುವ ನಲ್ಲರೆ ನೋಳ್ಪೊಡಾವ ಬೆ
ಟ್ಟುಗಳೊಳಮಾವ ನಂದನ ವನಂಗಳೊಳಂ ಬನವಾಸಿ ದೇಶದೊಳ್
ಉ || ಚಾಗದ ಭೋಗದಕ್ಕರದ ಗೇಯದ ಗೊಟ್ಟಿಯಲಂಪಿನಿಂಪುಗ
ಳ್ಗಾಗರವಾದ ಮಾನಸರೆ ಮಾನಸರಂತವರಾಗಿ ಪುಟ್ಟಲೇ
ನಾಗಿಯುಮೇನೋ ತೀರ್ದಪುದೆ ತೀರದೊಡಂ ಮಱಿದುಂಬಿಯಾಗಿ ಮೇಣ್
ಕೋಗಿಲೆಯಾಗಿ ಪುಟ್ಟುವುದು ನಂದನದೊಳ್ ವನವಾಸಿ ದೇಶದೊಳ್
ಪಂಪನ ದೇಶಪ್ರೇಮ
ತೆಂಕಣ ಗಾಳಿ ಸೋಂಕಿದೊಡಮೊಳ್ನುಡಿಗೇಳ್ದೊಡಮಿಂಪನಾಳ್ದ ಗೇ
ಯಂ ಕಿವಿವೊಕ್ಕೊಡಂ ಬಿರದ ಮಲ್ಲಿಗೆಗಂಡೊಡಮಾದ ಕೆಂದಲಂ
ಪಂ ಗೆಡೆಗೊಂಡೊಡಂ ಮಧುಮಹೋತ್ಸವಮಾದೊಡಮೇನನೆಂಬೆನಾ
ರಂಕುಸವಿಟ್ಟೊಡಂ ನೆನೆವುದೆನ್ನ ಮನಂ ವನವಾಸಿ ದೇಶಮಂ
ಮ || ಅಮರ್ದಂ ಮುಕ್ಕಳಿಪಂತುಟಪ್ಪ ಸುಸಿಲೊಂದಿಂಪುಂ ತಗುಳ್ದೊಂದು ಗೇ
ಯಮುಮಾದಕ್ಕರಗೊಟ್ಟಿಯುಂ ಚದುರರೊಳ್ವಾತುಂ ಕುಳಿರ್ ಕೋಳ್ಪ ಜೊಂ
ಪಮುಮೇವೇಳ್ಪುದನುಳ್ಳ ಮೆಯ್ಸುಖಮುಮಿತೆನ್ನಂ ಕರಂ ನೋಡಿ ನಾ
ಡೆ ಮನಂಗೊಂಡಿರೆ ತೆಂಕನಾಡ ಮಱೆಯಲ್ಕಿನ್ನೇಂ ಬರ್ಕುಮೇ
ನಿಮ್ಮದೊಂದು ಉತ್ತರ