ಸಾಹಿತ್ಯ : ಆರ್.ಎನ್. ಜಯಗೋಪಾಲ್
ಸಂಗೀತ : ವಿಜಯಭಾಸ್ಕರ್
ಗಾಯನ : ಬಿ.ಕೆ. ಸುಮಿತ್ರ
ಸಂಪಿಗೆ ಮರದ ಹಸಿರೆಲೆ ನಡುವೆ ಕೋಗಿಲೆ ಹಾಡಿತ್ತು
ಚಿಕ್ಕವ್ವ..ಚಿಕ್ಕವ್ವ..ಎನ್ನುತ ತನ್ನಯ ಗೆಳೆಯರ ಕರೆದಿತ್ತು
ಅದ ಕೇಳಿ ನಾ ಮೈ ಮರೆತೆ ಸ್ವರವೊಂದು ಆಗಲೆ ಕಲಿತೆ
ಹಾಡಿದೆ ಈ ಕವಿತೆ ನಾ ಹಾಡಿದೆ ಈ ಕವಿತೆ
ದೂರದ ಗುಡಿಯಲಿ ಪೂಜೆಯ ವೇಳೆಗೆ ಘಂಟೆಯು ಮೊಳಗಿತ್ತು
ಟಣ್ ಡಣ್ ಟಣ್ ಡಣ್..ಎನ್ನುತ ಸೇವೆಗೆ ಎಲ್ಲರ ಕರೆದಿತ್ತು
ಅದಕೇಳಿ ನಾ ಮೈಮರೆತೆ ಸ್ವರವೊಂದು ಆಗಲೆ ಕಲಿತೆ
ಹಾಡಿದೆ ಈ ಕವಿತೆ ನಾ ಹಾಡಿದೆ ಈ ಕವಿತೆ
ಹರಿಯುವ ನದಿಯಾ ನೋಡುತ ನಿಂತೆ ಅಲೆಗಳು ಕುಣಿದಿತ್ತು
ಕಲ ಕಲ ಕಲ ಕಲ..ಮಂಜುಳ ನಾದವು ಕಿವಿಗಳ ತುಂಬಿತ್ತು
ಅದಕೇಳಿ ನಾ ಮೈ ಮರೆತೆ ಸ್ವರವೊಂದು ಆಗಲೆ ಕಲಿತೆ
ಹಾಡಿದೆ ಈ ಕವಿತೆ ನಾ ಹಾಡಿದೆ ಈ ಕವಿತೆ